Jul 31, 2009

ವಿಜ್ಞಾನ ಮತ್ತು ಪ್ರಾಚೀನ ಭಾರತ

ಭೂಮಿ ಗೋಳಾಕಾರದಲ್ಲಿದೆ

ನಮಗೆ ಪುಸ್ತಕಗಳಲ್ಲಿ ತಿಳಿಸಿದ ಹಾಗೆ ಭೂಮಿ ಗೋಳಾಕಾರದಲ್ಲಿದೆ ಅಂತ ನಮಗೆ ಮೊದಲು ತಿಳಿಸಿಕೊಟ್ಟದ್ದು
ಕೋಪರ್ನಿಕಸ್ (1473 – 1543) ಮತ್ತೆ
ಗೆಲಿಲಿಯೋ (1564–1642).

ನಮ್ಮ ದೇಶದವರು ಏನು ಹೇಳಿದ್ದಾರೆ ಮತ್ತೆ ಯಾವಾಗ ಹೇಳಿದ್ದಾರೆ ಈಗ ನೋಡೋಣ
ಖಘೋಳಗ್ನ-ಗಣಿತಜ್ಞರಾದ ಆರ್ಯಭಟ (476–550 CE) ಹೇಳಿದ್ದು ,
"ಭೂಗೋಳ ಸರ್ವತೋ ವ್ರಿತ್ತಃ " - ( ಅರ್ಯಭತಿಯ, ಗೊಳಪದ, ಆರನೇ ಸ್ಲೋಕ)
ಈ ಸ್ಲೋಕದ ಅರ್ಥ ಏನು ಅಂದರೆ - "ಭೂಮಿ ಎಲ್ಲ ದಿಕ್ಕುಗಳಿಂದಲೂ ದುಂಡಗಿದೆ."

ಇನ್ನೊಬ್ಬ ಖಘೋಳಗ್ನ-ಗಣಿತಜ್ಞ-ಜ್ಯೋತಿಷಿಯಾದ ವರಾಹಮಿಹಿರ (505 – 587) ಹೇಳಿದ್ದು
"ಪಂಚ ಮಹಾಭೂತಮಯಸ್ತ್ರಾರಾಗನ್ನ ಪನ್ಜರೇ ಮಹ್ಲಗೂಲಃ" (ಪಂಚ ಸಿದ್ದಾಂತಿಕ, 13 ಚಾಪ್ಟರ್, ಸ್ಲೋಕ ಒಂದು )
ಈ ಸ್ಲೋಕದ ಅರ್ಥ ಏನು ಅಂದರೆ - "ಪಂಚಭೂತಗಳಿಂದ ಸೃಸ್ಟಿಯಾಗಿರುವ ಗೋಳಾಕಾರದ ಈ ಭೂಮಿಯು ಒಂದು ಕಬ್ಬಿಣದ ಬಲೆಯಲ್ಲಿ ನೇತು ಹಾಕಿರುವ ಬಾಲ್ ನಂತೆ ಹೊಳೆಯುತ್ತಿರುವ ನಕ್ಸತ್ರ ಗಳ ಜೊತೆ ನೇತಾಡುತ್ತಿದೆ."

ಈಗ ರ್ರಿಗ್ವೇದದ ಒಂದು ಮಂತ್ರದತ್ತ ಗಮನ ಹರಿಸೋಣ
"ಚಕ್ರಾನ್ನಾಸಃ ಪರ್ಲ್ನ್ನಹಂ ಪ್ರ್ರಿತ್ಹಿವ್ಯಾ" (ರ್ರಿಗ್ವೇದ 1.33.8 ) ಅಂದರೆ
"ಯಾವ ಭೂಮಿಯ ಪರಿದಿಯ ಮೇಲೆ ಜನ ವಾಸಿಸಿದ್ದಾರೋ"

ಹೀಗೆಹೇ ವೇದದ ಇನ್ನು ಅನೇಕ ಪದ್ಯಗಳು ನಮ್ಮ ಭೂಮಿ ಗೋಳಾಕಾರದಲ್ಲಿ ಇದೆ ಎನ್ನುವುದನ್ನ ಸಾರುತ್ತವೆ.

ಹೀಗೆ ಮತ್ತೊಬ್ಬ ಖಘೋಳಗ್ನ-ಗಣಿತಜ್ಞ ಭಾಸ್ಕರಾಚಾರ್ಯ (1114 – 1185) ತಮ್ಮ ಪುಸ್ತಕ "ಲೀಲಾವತಿ" ಯಲ್ಲಿ ಹೇಳಿದ್ದು
"ನಿನ್ನ ಕಣ್ಣಿಗೆ ಕಾಣುವುದೆಲ್ಲಾ ಸತ್ಯ ಅಲ್ಲ. ಭೂಮಿಯು ಕಣ್ಣಿಗೆ ಕಾಣಿಸುವಂತೆ ಚಪ್ಪಟೆಯಾಗಿಲ್ಲ.
ಅದು ಒಂದು ಗೋಳಾಕಾರದಲ್ಲಿದೆ. ಒಂದು ದೊಡ್ಡದಾದ ವೃತ್ತ್ತವನ್ನು ಬರೆದು ಅದರ ನಾಲ್ಕನೇ ಒಂದು ಭಾಗದಷ್ಟು ಪರಿದಿಯನ್ನು ನೋಡಿದರೆ ಅದು ಒಂದು ಸರಳ ರೇಖೆ ಹಾಗೆ ಕಾಣಿಸುತ್ತದೆ. ಆದರೆ ನಿಜಾರ್ಥದಲ್ಲಿ ಅದು ಒಂದು ವೃತ್ತ. ಅದೇ ರೀತಿ ಭೂಮಿಯೂ ಗೋಳಾಕಾರದಲ್ಲಿದೆ."

ಭೂಮಿಯು ಗೋಳಾಕಾರದಲ್ಲಿದೆ ಅನ್ನುವುದಕ್ಕೆ ಇನ್ನೊಂದು ಸಾಕ್ಷಿ ಗ್ರಹಣಗಳು, ಈಗ ಇದೇ ನಮ್ಮ ಖಘೋಳಗ್ನ-ಗಣಿತಜ್ಞ ಆರ್ಯಭಟ ಅವರು ಗ್ರಹಣದ ಬಗ್ಗೆ ಎಷ್ಟು ತಿಳಿದಿದ್ದರೂ ಅಂತ ನೋಡೋಣ...
"ಚಾದಯತಿ ಶಶಿ ಸೂರ್ಯಂ ಶಶಿನಂ ಮಹತಿ ಚ ಭೂಛಾಯಾ" ( ಆರ್ಯಭಾತ್ತಲ್ಯಂ, ಗೊಳಪದ, ಸ್ಲೋಕ ೩೭)
ಈ ಸ್ಲೋಕದ ಅರ್ಥ ಏನು ಅಂದರೆ "ಚಂದ್ರನು ಅಡ್ಡ ಬಂದಾಗ ಸೂರ್ಯಗ್ರಹಣವೂ ಮತ್ತು ಭೂಮಿಯು ಅಡ್ಡ ಬಂದಾಗ ಚಂದ್ರ ಗ್ರಹಣವು ಸಂಭವಿಸುವುದು. "

ಇಷ್ಟಲ್ಲದೇ ಇವರು ಗ್ರಹಣಗಳು ಎಷ್ಟು ದಿನಗಳಿಗೊಮ್ಮೆ ಸಂಭವಿಸುತ್ತವೆ ಅಂತಲೂ ಲೆಕ್ಕ ಹಾಕಿದ್ದರು ಮತ್ತು ಭೂಮಿಯು ಸೂರ್ಯನ ಸುತ್ತ ಒಂದು ಭಾರಿ ಸುತ್ತುವುದಕ್ಕೆ 365 ದಿನಗಳು 12 ನಿಮಿಷಗಳು ಮತ್ತು 30 ಸೆಕೆಂಡುಗಳು ಬೇಕೆಂದು ಸಹ ತಿಳಿದಿದ್ದರು ಅಷ್ಟೇ ಅಲ್ಲ ಭೂಮಿಯು ತನ್ನ ಸುತ್ತ ತಾನು ತಿರುಗಲು 23 ಗಂಟೆಗಳು 56 ನಿಮಿಷಗಳು ಮತ್ತು 4.1 ಸೆಕೆಂಡ್ ಗಳು ಬೇಕು ಅಂತಲೂ ತಿಳಿದಿದ್ದರು. (ದಿನ, ಗಂಟೆ, ನಿಮಿಷ ಮತ್ತು ಸೆಕೆಂಡ್ ಇವುಗಳನ್ನು ಇಷ್ಟೊಂದು ಕಡಾ-ಖಂಡಿತವಾಗಿ ಹೇಗೆ ತಿಳಿದಿದ್ದರು ಅನ್ನುವುದನ್ನ ಇನ್ನೊಮ್ಮೆ ವಿವರಣೆ ನೀಡುತ್ತೇನೆ ಈ ದಿನ ಇಷ್ಟು ಸಾಕು)

ಈಗ ನಮ್ಮ ಗುಂಡಗಿನ ಭೂಮಿಯ ಕೊನೆಯ ವಾಕ್ಯಕ್ಕೆ ಬರೋಣ...
"ಭೂಗೋಳ" ಪದದ ಅರ್ಥವೇ ಗೊಳಾಕಾರದ ಭೂಮಿ ಅಂತ ಆಗುತ್ತೆ. ಇದರ ಅರ್ಥ ಶತಮಾನಗಳ ಹಿಂದೆಯೇ ನಮ್ಮ ಪೂರ್ವಿಕರು ಭೂಮಿಯು ದುಂಡ(ಗೋಳಾಕಾರ)ಗಿದೆ ಎಂದು ತಿಳಿದಿದ್ದರು ಅಂತ ಅನ್ನಿಸುತ್ತೆ ಅಲ್ಲವೇ?

ಆದರು ನಾವು-ನೀವು ನಮ್ಮ ಪಠ್ಯ-ಪುಸ್ತಕದಲ್ಲಿ ಓದಿದ್ದು ಗೆಲಿಲಿಯೋ, ಕೊಪೆರ್ನಿಕಸ್ ಮತ್ತೆ ಕೆಪ್ಲರ್ ಅಂತ ಅಲ್ಲವೇ? ಯಾಕೆ ಈಗೆ?

******

ನನ್ನ ಕಾವ್ಯ

ಹೆಬ್ಬಯಕೆ-ನಿರ್ಬಯಕೆ


-೧-

ಎಲ್ಲ ಮಿತಿಗಳಿ೦ದ
ಪರಿಧಿಗಳಿ೦ದ ಮುಕ್ತನಾದ
ಅನ೦ತ ಆಗಸದ೦ತೆ
ಸುಗ೦ಧವೋ ದುರ್ನಾತವೋ
ಯಾವ ಮಡಿ ಮೈಲಿಗೆಇಲ್ಲದೆ
ಎಲ್ಲವನೂ ಸಮನಾಗಿ
ಜೀಕುವ ಗಾಳಿಯ
ಸ್ಥಿತಪ್ರಜ್ಞನ೦ತೆ
ಜಗದ ಹೊಲಸನೆಲ್ಲವ
ಹೊಲಬರೆಲ್ಲರ
ಹಸಿನಗುತ ಹೊತ್ತಿರುವ
ಭೂಮಾತೆ
ದುರುಳ ನರನ
ಚರಿತ್ರೆಯನೆಲ್ಲಾ ರಾರಾಜಿಸುವ
ಆತನ ಅತ್ಯಾಚಾರವ
ಠೇ೦ಕಾರವನೆಲ್ಲ
ಜೀರ್ಣಿಸಿಕೊ೦ಡೇ
ಇನ್ನೂ ಪೂರ್ಣವಾಗೇ
ಉಳಿದಿರುವ ಆಕೆಯ
ಪರಿಯಲ್ಲೇ ಪರಿತಪಿಸುವ
ಹೆಬ್ಬಯಕೆ...ಅಹ೦ಕಾರ ನನ್ನದು.
______
-೨-

ಆದರೆ ಇಲ್ಲಿ ಎಲ್ಲ
ಲೆಕ್ಕಾಚಾರವೂ
ಕರಾರುವಾಕ್ಕಾಗಿಲ್ಲ!
ಅನ೦ತ ಆಗಸದಲ್ಲೂ
ಮೋಡಗಳು ಕವಿಯುತ್ತವೆ
ಅಮಾವಾಸ್ಯೆಯ ಗಾಡಾ೦ಧಕಾರ
ಅಮರಿಕೊಳ್ಳುತ್ತದೆ
ಗುಡುಗು ಮಿ೦ಚಿನ
ಸ೦ಚೂ ವಾಸ್ತವವಾಗುತ್ತದೆ
ಕ್ಷಮಯಾ ಧರಿತ್ರೀ
ಕೂಡಾ ಹೊರತಿಲ್ಲ
ತನ್ನೊಡಲಲ್ಲೇ
ಸುನಾಮಿ, ಭೂಕ೦ಪದ೦ಥ
ಅಸುರರನ್ನೂ ಹೆತ್ತು
ಹೊರಹಾಕುತ್ತದೆ
ಪಾವನ ಪವನವೂ
ಒಮ್ಮೊಮ್ಮೆ ಪತಿತನಾಗುವುದು೦ಟು
ತೂಫಾನು, ಚ೦ಡಮಾರುತದ
ಚ೦ಡಮದ್ದಳೆಯ
ರುದ್ರನೃತ್ಯವನೂ ತೋರಿಸುವನು
ಈ ಗುಣಗಳೂ
ನಾನಾಗಬೇಕಲ್ಲವೇ
ಎನ್ನುವ ಅಳಲಿನ
ನಿರ೦ತರ ನಿರ್ಬಯಕೆಯೂ
ನನ್ನ ಅವಿಭಾಜ್ಯ ಅ೦ಗ...!

*******